ನೆಲ್ಯಾಡಿ: ಬಜತ್ತೂರು ಗ್ರಾ.ಪಂ.ನ ಸಾಮಾನ್ಯ ಸಭೆ ಮೇ. 9ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ ಬಿ.,ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸದ್ರಿ ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಪಂಚಾಯತದ ಎಸ್ಕ್ರೋ ಅನುದಾನದ ಬಳಕೆ ಮತ್ತು ನಿಧಿ-೨ರ ಅನುದಾನಕ್ಕೆ ಕ್ರಿಯಾ ಯೋಜನೆ ತಯಾರಿಸಲಾಯಿತು. ಗ್ರಾ.ಪಂ.ಉಪಾಧ್ಯಕ್ಷೆ ಸ್ಮಿತಾ, ಸದಸ್ಯರುಗಳಾದ ಸಂತೋಷ್ ಕುಮಾರ್ ಪಿ., ಗಂಗಾಧರ ಕೆ.ಎಸ್., ಉಮೇಶ್ ಓಡ್ರಪಾಲು, ಮೋನಪ್ಪ ಗೌಡ, ಯಶೋದಾ ಪಿ.ಎಸ್., ಭಾಗೀರಥಿ, ಪ್ರೆಸಿಲ್ಲಾ ಡಿ.ಸೋಜ, ರತ್ನ, ವಿಮಲ ಉಪಸ್ಥಿತರಿದ್ದರು. ಪಿಡಿಒ ಪ್ರವೀಣ್ ಕುಮಾರ್ ಬಿ.,ಸ್ವಾಗತಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಿದರು. ಕಾರ್ಯದರ್ಶಿ ಗಿರಿಯಪ್ಪ ಗೌಡ ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದರು.