ಪುತ್ತೂರು: ತಾಲೂಕು ಆಡಳಿತದ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರಿಂದ ಸಾರ್ವಜನಿಕ ಕುಂದುಕೊರತೆ ಸಭೆ ಹಾಗೂ ಸಾಗುವಳಿ ಚೀಟಿ ವಿತರಣೆ ಮೇ.17ರಂದು ಪುತ್ತೂರು ಪುರಭವನದಲ್ಲಿ ಜರಗಿತು.
ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿ.ಪಂ. ಸಿಎಸ್ ಡಾ. ಕುಮಾರ್, ಎಸ್ಪಿ ಹೃಷಿಕೇಶ್ ಸೋನಾವಣೆ, ಎಸಿ ಗಿರೀಶ್ ನಂದನ್, ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್, ತಹಶೀಲ್ದಾರ್ ರಮೇಶ್ ಬಾಬು, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಉಪಸ್ಥಿತರಿದ್ದರು.