ಭ್ರಷ್ಟಾಚಾರ ವಿರುದ್ಧದ ಸುದ್ದಿಯ ಜನಾಂದೋಲನಕ್ಕೆ ಸಚಿವ ಸುನಿಲ್ ಕುಮಾರ್ ಬೆಂಬಲ

0

ಪುತ್ತೂರು: ಲಂಚ ಮತ್ತು ಭ್ರಷ್ಟಾಚಾರದ ವಿರುದ್ಧ ಸುದ್ದಿ ಸಮೂಹ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಜನಾಂದೋಲನಕ್ಕೆ ಸಚಿವ ವಿ.ಸುನಿಲ್ ಕುಮಾರ್ ಬೆಂಬಲ ಸೂಚಿಸಿದ್ದಾರೆ.

 

ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖಾ ಖಾತೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕಾರ್ಕಳ ಶಾಸಕ ಸುನೀಲ್‌ ಕುಮಾರ್ ಅವರು ಮೇ 17ರಂದು ಪುತ್ತೂರು ತಾಲೂಕು ಪಂಚಾಯತ್ ಕಛೇರಿಯಲ್ಲಿ ‘ಲಂಚ, ಭ್ರಷ್ಟಾಚಾರಕ್ಕೆ ಬಹಿಷ್ಕಾರ-ಉತ್ತಮ ಸೇವೆಗೆ ಪುರಸ್ಕಾರ’ ಫಲಕ ಸ್ವೀಕರಿಸಿ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬೆಂಬಲ ಇದೆ ಎಂದು ತಿಳಿಸಿದರು.

ಶಾಸಕ ಸಂಜೀವ ಮಠಂದೂರು, ದ.ಕ. ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಮತ್ತು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಸಚಿವರೊಂದಿಗೆ ಉಪಸ್ಥಿತರಿದ್ದರು. ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಸುದ್ದಿ ನ್ಯೂಸ್ ಚಾನೆಲ್ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ ಅವರು ಸಚಿವ ಸುನಿಲ್ ಕುಮಾರ್ ಅವರಿಗೆ ಸುದ್ದಿ ಜನಾಂದೋಲನದ ಮಾಹಿತಿ ನೀಡಿದರು. ಅಲ್ಲದೆ, ಸುಳ್ಯ ತಾಲೂಕಿನ ಸುಳ್ಯ ಪಟ್ಟಣದಲ್ಲಿ ಉಂಟಾಗಿರುವ ಕಸದ ಸಮಸ್ಯೆ ಕುರಿತು ಸಚಿವರ ಗಮನ ಸೆಳೆದರು. ಈ ಬಗ್ಗೆ ಗಮನ ಹರಿಸುವುದಾಗಿ ಸಚಿವ ಸುನಿಲ್ ತಿಳಿಸಿದರು.

ಸುದ್ದಿ ಜನಾಂದೋಲನ ವೇದಿಕೆಯ ಮುಖ್ಯಸ್ಥ ಗಣೇಶ್ ಕಲ್ಲರ್ಪೆ ಮತ್ತು ಸುದ್ದಿ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಫಾರೂಕ್ ಶೇಖ್ ಮುಕ್ವೆ ಉಪಸ್ಥಿತರಿದ್ದರು.‌

LEAVE A REPLY

Please enter your comment!
Please enter your name here