ಪೆರ್ಲಂಪಾಡಿ: ಕೊಳ್ತಿಗೆ ಗ್ರಾಮದ ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ಮೇ.16 ರಂದು ಶಾಲಾ ಪ್ರಾರಂಭೋತ್ಸವ ನಡೆಯಿತು. ವಿದ್ಯಾರ್ಥಿಗಳನ್ನು ಮೆರವಣಿಗೆಯಲ್ಲಿ ಕರೆತಂದು ಸ್ವಾಗತಿಸಲಾಯಿತು. ಶಾಲಾ ಆಡಳಿತ ಸಮಿತಿಯ ಸಂಚಾಲಕರಾದ ಗಣೇಶ್ ಭಟ್ ಮಾಪಲ ಮಜಲು ಹಾಗೂ ಸದಸ್ಯರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಯೋಜಕರಾದ ಸತೀಶ್ ರಾವ್, ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ .ಎಸ್, ಶಿಕ್ಷಕ ವೃಂದ , ಸಿಬ್ಬಂದಿ ವರ್ಗ ಹಾಗೂ ಪೋಷಕರು ಉಪಸ್ಥಿತರಿದ್ದರು.