ಇಚ್ಲಂಪಾಡಿ: ಬಂಟರ ಸಂಘ ಗ್ರಾಮ ಸಮಿತಿ ಉದ್ಘಾಟನೆ

0

 

ನೆಲ್ಯಾಡಿ: ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು, ತಾಲೂಕು ಬಂಟರ ಸಂಘ ಪುತ್ತೂರು ಹಾಗೂ ನೆಲ್ಯಾಡಿ ವಲಯ ಬಂಟರ ಸಂಘದ ಸಹಭಾಗಿತ್ವದಲ್ಲಿ ಆರಂಭಗೊಂಡಿರುವ ಬಂಟರ ಸಂಘ ಗ್ರಾಮ ಸಮಿತಿ ಇಚ್ಲಂಪಾಡಿ ಇದರ ಉದ್ಘಾಟನಾ ಸಮಾರಂಭ ಮೇ ೧೫ರಂದು ಆನಂದ ಶೆಟ್ಟಿಯವರ ಮನೆ ಕಂಚಿನಡ್ಕ ಅನುಗ್ರಹ ನಿಲಯದಲ್ಲಿ ನಡೆಯಿತು.


ಮಾತೃಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು ಉದ್ಘಾಟಿಸಿದರು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾತೃಸಂಘದ ನಿರ್ದೇಶಕ ಚಂದ್ರಹಾಸ ಶೆಟ್ಟಿ ಎನ್., ಪುತ್ತೂರು ತಾಲೂಕು ಯುವ ಬಂಟರ ಸಂಘದ ಸಂಚಾಲಕ ರವಿಪ್ರಸಾದ್ ಶೆಟ್ಟಿ, ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆಗುತ್ತು ಶುಭಹಾರೈಸಿದರು. ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘದ ಕೋಶಾಧಿಕಾರಿ ವಾಣಿ ಎಸ್.ಶೆಟ್ಟಿ, ಇಚ್ಲಂಪಾಡಿ ಬಂಟರ ಸಂಘ ಗ್ರಾಮ ಸಮಿತಿ ಅಧ್ಯಕ್ಷ ಜಯಾನಂದ ಶೆಟ್ಟಿ ಗುತ್ತಿನಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅತಿಥಿಗಳಿಗೆ ಶಾಲು ಹಾಕಿ, ತಾಂಬೂಲ, ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು. ನೆಲ್ಯಾಡಿ ವಲಯ ಬಂಟರ ಸಂಘದ ಸಹ ಸಂಚಾಲಕ ಜಯಾನಂದ ಬಂಟ್ರಿಯಾಲ್ ಸ್ವಾಗತಿಸಿ, ವೇದಾವತಿ ವಂದಿಸಿದರು. ಹರೀಶ್ ಶೆಟ್ಟಿ ನೇರ್ಲ ಕಾರ್ಯಕ್ರಮ ನಿರೂಪಿಸಿದರು. ನೆಲ್ಯಾಡಿ ವಲಯ ಸಂಘದ ಪದಾಧಿಕಾರಿಗಳಾದ ಸುಂದರ ಶೆಟ್ಟಿ ಪುರ, ಪ್ರವೀಣ್ ಭಂಡಾರಿ, ಆನಂದ ಶೆಟ್ಟಿ ಕಂಚಿನಡ್ಕ, ಗಣೇಶ್ ಶೆಟ್ಟಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ವತಿಯಿಂದ ಅತಿಥಿಗಳಗೆ ಆತಿಥ್ಯ ನೀಡಲಾಯಿತು.

LEAVE A REPLY

Please enter your comment!
Please enter your name here