ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ವಿಶೇಷ ಸಭೆ

0

  • ಲಂಚ ಭ್ರಷ್ಟಾಚಾರ ವಿರುದ್ಧದ ಸುದ್ದಿ ಜನಾಂದೋಲನಕ್ಕೆ ಬೆಂಬಲ

 

ಪುತ್ತೂರು : ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ವಿಶೇಷ ಸಭೆಯು ಸಂಘದ ಅಧ್ಯಕ್ಷ ಯೂಸುಫ್ ರೆಂಜಲಾಡಿಯವರ ಅಧ್ಯಕ್ಷತೆಯಲ್ಲಿ ಪುತ್ತೂರು ರೈಲ್ವೇ ಸ್ಟೇಷನ್ ರಸ್ತೆಯಲ್ಲಿರುವ ಮಾತೃಛಾಯ ಸಭಾಂಗಣದಲ್ಲಿ ಮೇ.17 ರಂದು ಸಂಜೆ ನಡೆಯಿತು. ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಕಾಂತ್ ರೈ ಅನಿಕೂಟೇಲು ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಸ್ಥಾಪಕ ಅಧ್ಯಕ್ಷ ಉಮೇಶ್ ಮಿತ್ತಡ್ಕ, ನಿಕಟ ಪೂರ್ವ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ಹಾಗೂ ಸದಸ್ಯರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಲಂಚ ಭ್ರಷ್ಟಾಚಾರದ ವಿರುದ್ಧ ಸುದ್ದಿ ಸಮೂಹ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಜನಾಂದೋಲನಕ್ಕೆ ಬೆಂಬಲ ಸೂಚಿಸಲಾಯಿತು. ಉಪಾಧ್ಯಕ್ಷೆ ಶೈಲಜಾ ಸುದೇಶ್ ಸ್ವಾಗತಿಸಿದರು. ಖಜಾಂಚಿ ನರೇಶ್ ಜೈನ್ ವಂದಿಸಿದರು.

LEAVE A REPLY

Please enter your comment!
Please enter your name here