ತಾ| ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ವಿಷ್ಣುಪ್ರಸಾದ್; ಸುರೇಶ್ ಕುಮಾರ್ ದುಗ್ಗಲಡ್ಕಕ್ಕೆ ವರ್ಗ

0

ಪುತ್ತೂರು: ತಾಲೂಕು ಪಂಚಾಯತ್ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾಗಿ ಕಳೆದ ಆರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ಕುಮಾರ್‌ರವರು ಸುಳ್ಯ ತಾಲೂಕಿನ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಗೆ ಮುಖ್ಯ ಶಿಕ್ಷಕರಾಗಿ ವರ್ಗಾವಣೆಗೊಂಡಿರುತ್ತಾರೆ.

 

ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ನಿವಾಸಿಯಾಗಿರುವ ಸುರೇಶ್ ಕುಮಾರ್‌ರವರು 2016ರ ಅಕ್ಟೋಬರ್‌ನಿಂದ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯು ನಿರ್ದಿಷ್ಟಪಡಿಸಿದ ಹುದ್ದೆಯಲ್ಲಿ ಗರಿಷ್ಠ 5ವರ್ಷಕ್ಕಿಂತ ಅಧಿಕ ಸೇವೆ ಸಲ್ಲಿಸಿದವರಿಗೆ ನಡೆಸಿದ ಕೌನ್ಸೆಲಿಂಗ್‌ನಲ್ಲಿ ದುಗ್ಗಲಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಖಾಲಿಯಿರುವ ಮುಖ್ಯ ಶಿಕ್ಷಕರ ಹುದ್ದೆಗೆ ಇದೀಗ ಇವರು ವರ್ಗಾವಣೆಗೊಂಡಿರುತ್ತಾರೆ. ಸುರೇಶ್ ಕುಮಾರ್‌ರವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಆದೇಶದಂತೆ ಶಾಂತಿನಗರ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ವಿಷ್ಣುಪ್ರಸಾದ್ ಸಿ.ಯವರು ಪ್ರಭಾರವಾಗಿ ಕಾರ್ಯನಿರ್ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here