ಕಡಬ: ಈಗಾಗಲೇ ಸುರಿಯುತ್ತಿರುವ ಭಾರಿ ಮಳೆಗೆ ಚರಂಡಿ ವ್ಯವಸ್ಥೆ ಸರಿಯಿಲ್ಲದೆ ರಸ್ತೆಯಲ್ಲಿಯೇ ಮಳೆ ನೀರು ಹರಿಯುತ್ತಿದೆ. ಕಡಬ ಪಂಜ ರಸ್ತೆಯಲ್ಲಿ ರಸ್ತೆಯಲ್ಲಿ ನೀರು ನಿಂತಿರುವುದನ್ನು ಗಮನಿಸಿದ ಸಮಾಜ ಸೇವಕ ರಘುರಾಮ ಕುಕ್ಕೆರಬೆಟ್ಟು ಅವರು ಚರಂಡಿ ಮಾಡಿ ರಸ್ತೆಯಲ್ಲಿ ನಿಂತಿರುವ ನೀರನ್ನು ತೆರವುಗೊಳಿಸಿದ್ದು ಎಲ್ಲರ ಮೆಚ್ವುಗೆಗೆ ಪಾತ್ರವಾಯಿತು.