ಮೇ;27 ಲೋಕಾಯುಕ್ತರಿಂದ ಪುತ್ತೂರಿನಲ್ಲಿ ಅಹವಾಲು ಸ್ವೀಕಾರ

0

ಪುತ್ತೂರು:ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು, ನಿರೀಕ್ಷಕರು ಮೇ.23ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದು ಮೇ.27ರಂದು ಪುತ್ತೂರು ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಮೇ.23ರಂದು ಪೂ.11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ನಗರದ ತಹಶೀಲ್ದಾರರ ಕಚೇರಿ, ಮೆ.25ರ ಪೂ.11 ರಿಂದ ಮಧ್ಯಾಹ್ನ 1ರವರೆಗೆ ಬಂಟ್ವಾಳ ತಾಲೂಕಿನ ತಹಶೀಲ್ದಾರರ ಕಚೇರಿಯಲ್ಲಿ, ಮೇ 27ರ ಪೂ.11ರಿಂದ ಮಧ್ಯಾಹ್ನ 1ರವರೆಗೆ ಪುತ್ತೂರು ತಾಲೂಕಿನ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ ದೂರವಾಣಿ: 0824-2950997, 9243456629, ಪೊಲೀಸ್ ಉಪಾಧೀಕ್ಷಕರ-1 ಕಚೇರಿ ದೂರವಾಣಿ:0824-2453420, 9448635348, ಉಪಾಧೀಕ್ಷಕರ-2 ಕಚೇರಿ ದೂರವಾಣಿ:0824-2453420, 7019967061, ಪೊಲೀಸ್ ನಿರೀಕ್ಷಕರ ಕಚೇರಿ ದೂರವಾಣಿ:0824-2427237, 9448461816 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here