ರಾಮಕುಂಜ: 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 624 ಅಂಕ ಪಡೆದುಕೊಂಡು ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುವ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಜೀವನ್ಗೆ ಕಾಂಗ್ರೆಸ್ ರಾಮಕುಂಜ ಗ್ರಾಮ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ರಾಮಕುಂಜ ಗ್ರಾಮದ ಸಂಪ್ಯಾಡಿಯಲ್ಲಿರುವ ಜೀವನ್ ಮನೆಗೆ ಭೇಟಿ ನೀಡಿದ ಪಕ್ಷದ ಮುಖಂಡರು ಶಾಲುಹಾಕಿ, ಹಾರಾರ್ಪಣೆ, ಫಲತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಿದರು. ಕೆಪಿಸಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಕೃಷ್ಣಪ್ಪ ಜಿ., ರಾಮಕುಂಜ ಗ್ರಾ.ಪಂ.ಸದಸ್ಯ, ಕೆಪಿಸಿಸಿ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ಯತೀಶ್ ಬಾನಡ್ಕ, ಕಾಂಗ್ರೆಸ್ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಉರ್ಕ, ಬೂತ್ ಸಮಿತಿ ಅಧ್ಯಕ್ಷ ಫಾರೂಕ್ ಅಮೈ, ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟಿ ಅಂಬಾ ಮತ್ತಿತರರು ಉಪಸ್ಥಿತರಿದ್ದರು.