ಪುತ್ತೂರು:ಕೆಎಸ್ಆರ್ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಮೇ.21ರಂದು ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ವಿನಾಯಕ ನಗರದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನಕ್ಕೆ ತೆರಳುವ ದ್ವಾರದ ಬಳಿ ನಡೆದಿದೆ.
ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸುತ್ತಿದ್ದ ರಾಜಹಂಸ ಬಸ್ ಹಾಗೂ ಎದುರಿನಿಂದ ಬಂದ ಕೇರಳ ನೋಂದಣಿಯ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಿಂದ ಕಾರಿನ ಮುಂಭಾಗ ಜಖಂಗೊಂಡಿದೆ. ಯಾವುದೇ ರೀತಿಯ ಗಾಯಗಳುಂಟಾಗಿಲ್ಲ ಎಂದು ತಿಳಿದುಬಂದಿದೆ.