- ಕಾಂಗ್ರೆಸ್ ವಲಯದಲ್ಲಿ ಸಂಚಲನ
ಪುತ್ತೂರು; ಕರ್ನಾಟಕ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ರವರು ಮೇ.20 ರಂದು ರಾತ್ರಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸುಳ್ಯದಿಂದ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ತೆರಳುವ ವೇಳೆ ಹೇಮನಾಥ ಶೆಟ್ಟಿ ಮನೆಗೆ ಭೇಟಿ ನೀಡಿದ್ದು ರಾಜಕೀಯ ವಲಯದಲ್ಲಿ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿಗೆ ಕಾಂಗ್ರೆಸ್ ಅಭ್ಯರ್ಥಿಯಾರೆಂಬುದು ಕಾರ್ಯಕರ್ತರೊಳಗೆ ಚರ್ಚೆಯಲ್ಲಿರುವಾಗಲೇ ಈ ಭೇಟಿ ಮಾತುಕತೆ ನಡೆದಿರುವುದು ಕಾಂಗ್ರೆಸ್ ಕಾರ್ಯಕರ್ತರ ಕುತೂಹಲಕ್ಕೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಸೇವಾದಳದ ಮಾಜಿ ಅಧ್ಯಕ್ಷೆ ಡಾ. ಜಯಂತಿ ಆರ್ ಶೆಟ್ಟಿ, ಇಂಟಕ್ ಮುಖಂಡ ಚಿತ್ತರಂಜನ್ ಶೆಟ್ಟಿ, ಅರಿಯಡ್ಕ ಗ್ರಾಪಂ ಸದಸ್ಯ ದಿವ್ಯನಾಥ ಶೆಟ್ಟಿ ಉಪಸ್ಥಿತರಿದ್ದರು. ಹೇಮನಾಥ ಶೆಟ್ಟಿ, ಮಾಜಿ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಯವರು ಸ್ವಾಗತಿಸಿದರು.