ಸಾಲೆತ್ತೂರು: ಅಪಹರಣವೆಂದು ತಿಳಿದು ಮಹಿಳೆಯರಿದ್ದ ಕಾರಿಗೆ  ನಾಗರಿಕರಿಂದ ತಡೆ –  ಕಾರು ಚಾಲಕ ಪೊಲೀಸ್ ವಶಕ್ಕೆ

0

ವಿಟ್ಲ: ಟ್ರಾವೆಲ್ಸ್ ಕಾರು ಚಾಲಕನೋರ್ವ ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯರು ಆತಂಕಗೊಂಡು ಕಿರುಚಾಡುತ್ತಿದ್ದ ವೇಳೆ ಸಾರ್ವಜನಿಕರು ಅಪಹರಣವೆಂದು ತಿಳಿದು ಕಾರನ್ನು ಅಡ್ಡಗಟ್ಟಿ, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಮಂಗಳೂರು ಹೊರ ವಲಯದ ತೊಕ್ಕೊಟ್ಟು ಪಿಲಾರಿನ ಮಹಿಳೆಯರು ಪಣೋಲಿಬೈಲಿಗೆ ತೆರಳುವ ಹಿನ್ನೆಲೆ ಕದ್ರಿಯಿಂದ ಬಾಡಿಗೆ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಕಾರು ಚಾಲಕ ಕಾಡುಮಠ ನಿವಾಸಿ ಸಾಗರ್(26 ವ.) ಎಂಬವರು ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿದ್ದು, ಗಾಬರಿಗೊಂಡ ಮಹಿಳೆಯರು ನೆರವಿಗಾಗಿ ಬೊಬ್ಬೆ ಹೊಡೆಯುತ್ತಿದ್ದ ವೇಳೆ ಸಾರ್ವಜನಿಕರು ಅಪಹರಣವೆಂದು ತಿಳಿದು ಕಾರನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ಲಭಿಸಿದೆ‌.

 

LEAVE A REPLY

Please enter your comment!
Please enter your name here