ರೂ. 21,500 ಮೌಲ್ಯದ ಗಾಂಜಾ ವಶ
ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ರೈಲ್ವೇ ಹಳಿಯಲ್ಲಿ ಗಾಂಜಾವನ್ನು ಇರಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ರೂ. 21,500 ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದು ಕೊಂಡ ಘಟನೆ ಮೇ 22ರಂದು ನಡೆದಿದೆ.
ಕಡಬ ತಾಲೂಕಿನ ಕುಂತೂರು ಪೆರಾಬೆ ಗ್ರಾಮದ ಕೋಚಕಟ್ಟೆ ಉಮ್ಮರಬ್ಬ ಎಂಬವರ ಪುತ್ರ ಶಫೀಕ್ ಕೆ.ವಿ(24ವ) ಮತ್ತು ಕುಂತೂರು ಎರ್ಮಲ ನಿವಾಸಿ ಅಬ್ದುಲ್ಲ ಎಂಬವರ ಪುತ್ರ ರಾಝೀಕ್(28ವ)ರವರು ಬಂಧಿತ ಆರೋಪಿಗಳು.