ಚಾರ್ವಾಕ – ಒಕ್ಕಲಿಗ ಸ್ವ – ಸಹಾಯ ಗುಂಪುಗಳ ರಚನೆಯ ಸಮಾಲೋಚನಾ ಸಭೆ

0

ಕಾಣಿಯೂರು: ಒಕ್ಕಲಿಗ ಸ್ವ- ಸಹಾಯ ಟ್ರಸ್ಟ್ ಪುತ್ತೂರು ಇದರ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಮಹಿಳಾ ಘಟಕ ಚಾರ್ವಾಕ ಗ್ರಾಮ ಇವರ ಸಹಕಾರದೊಂದಿಗೆ ಒಕ್ಕಲಿಗ ಸ್ವ – ಸಹಾಯ ಗುಂಪುಗಳ ರಚನೆಯ ಬಗ್ಗೆ ಸಮಾಲೋಚನಾ ಸಭೆಯು ಚಾರ್ವಾಕ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನ ನಡೆಯಿತು. ಚಾರ್ವಾಕ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನೆಮಣ್ಣ ಗೌಡ ಅಂಬುಲ ಉದ್ಘಾಟಿಸಿದರು.

 

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕ ಪ್ರವೀಣ್ ಕುಂಟ್ಯಾನ, ಒಕ್ಕಲಿಗ ಸ್ವ ಸಹಾಯ ಟ್ರಸ್ಟಿನ ಸ್ಥಾಪಕ ಅಧ್ಯಕ್ಷ ಎ.ವಿ ನಾರಾಯಣ ಗೌಡ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಚಾರ್ವಾಕ, ಒಕ್ಕಲಿಗ ಸ್ವಸಹಾಯ ಟ್ರಸ್ಟಿನ ಮೇಲ್ವಿಚಾರಕ ವಿಜಯ್ ಕುಮಾರ್ ಉಪಸ್ಥಿತರಿದ್ದರು. ಮೇಲ್ವಿಚಾರಕ ವಿಜಯ್ ಕುಮಾರ್ ರವರು ಸಂಘದ ನಿಯಮಗಳನ್ನು ತಿಳಿಸಿದರು. ಪ್ರೇರಕ ಉದಯರವರು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here