ಸರಕಾರದ ಯೋಜನೆಗಳನ್ನು ಮನೆ ಮನೆ ತಲುಪಿಸಿ – ಬಿಜೆಪಿ ನಗರ ಮಂಡಲದ ಕಾರ್ಯ ನಿರ್ವಹಣಾ ಸಭೆಯಲ್ಲಿ ರಾಮದಾಸ್ ಬಂಟ್ವಾಳ್

0


ಪುತ್ತೂರು: ನರೇಂದ್ರ ಮೋದಿ ನೇತೃತ್ವದ ಸರಕಾರ 8 ವರ್ಷಗಳಲ್ಲಿ ನೀಡಿದ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕಾರ್ಯ ಕಾರ್ಯಕರ್ತರಿಂದ ಆಗಬೇಕು. ಈ ನಿಟ್ಟಿನಲ್ಲಿ ಮುಂದಿನ ದಿನ ಸೇವೆ, ಸುಶಾಸನ, ಬಡವರ ಕಲ್ಯಾಣ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕೆಂದು ಬಿಜೆಪಿ ಮಂಡಲದ ಪ್ರಭಾರಿಯಾಗಿರುವ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳರವರು ಹೇಳಿದ್ದಾರೆ.
ಪತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಮೇ 23ರಂದು ಬಿಜೆಪಿ ನಗರ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆಯಲ್ಲಿ ಅವರು ಪಕ್ಷ ಸಂಘಟನೆ, ಕಾರ್ಯಯೋಜನೆಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಸರಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಹೆಚ್ಚಿನ ಸಮಯವನ್ನು ಪಕ್ಷಕ್ಕಾಗಿ ಮೀಸಲಿಡಬೇಕೆಂದರು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರು ಅಧ್ಯಕ್ಷತೆ ವಹಿಸಿದ್ದರು.  ನಗರಸಭಾಧ್ಯಕ್ಷ ಜೀವಂಧರ್ ಜೈನ್ ರವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಸಭೆಯನ್ನು ಉದ್ಘಾಟಿಸಿದರು. ಜಿಲ್ಲಾ ಹಿಂದುಳಿದ ವರ್ಗಗಗಳ ಮೋರ್ಚಾದ ಅಧ್ಯಕ್ಷ ಆರ್.ಸಿ. ನಾರಾಯಣ್ ಸರಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು.  ಮಂಡಲದ ಉಪಾಧ್ಯಕ್ಷೆ ಜ್ಯೋತಿ ಆರ್ ನಾಯಕ್ ಪ್ರಾರ್ಥಿಸಿ, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ ಕಾರ್ಯಕ್ರಮ ನಿರ್ವಹಿಸಿದರು. ಮುಂಡಲದ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಸದಸ್ಯರುಗಳು ಮೋರ್ಚಾ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿಗಳು  ನಗರಸಭಾ ಸದಸ್ಯರುಗಳು  ಮಹಾಶಕ್ತಿ ಕೇಂದ್ರ ಅಧ್ಯಕ್ಷರು  ಕಾರ್ಯದರ್ಶಿಗಳು ಶಕ್ತಿಕೇಂದ್ರ  ಪ್ರಮುಖರು ಪ್ರಕೋಷ್ಠಗಳು ಸಂಚಾಲಕರು  ಸಹ ಸಂಚಾಲಕರು ಹಾಗೂ ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here