ರಾಮಕುಂಜ: ರಾಮಕುಂಜ ಗ್ರಾಮ ಪಂಚಾಯಿತಿ ಕೆಡಿಪಿ ಸಭೆ ಮೇ 21ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಮಾಲತಿ ಎನ್.ಕೆ.ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಸ್ತೆ ಬದಿ ಹಾಗೂ ಇತರ ಕಡೆಗಳಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು. ರಾಮಕುಂಜ ಸಿಆರ್ಪಿ ಮಹೇಶ ಎಂ., ಸಾಮಾಜಿಕ ಅರಣ್ಯ ಇಲಾಖೆಯ ಕೃಷ್ಣ ಜೋಗಿ, ಕೃಷಿ ಇಲಾಖೆಯ ತಿಮ್ಮಪ್ಪ ಗೌಡ ಕೆ., ರಾಮಕುಂಜ ಗ್ರಾಮಕರಣಿಕ ಶೇಷಾದ್ರಿ ಎನ್., ಅಂಗನವಾಡಿ ಮೇಲ್ವಿಚಾರಕಿ ಉಮಾವತಿ ಕೆ., ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಲಲಿತ ಕೆ., ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಯಿಲ ಶಾಖಾ ಮೇನೇಜರ್ ಪಿ.ಆನಂದ ಗೌಡರವರು ಸಭೆಯಲ್ಲಿ ಉಪಸ್ಥಿತರಿದ್ದು ಚರ್ಚೆಯಲ್ಲಿ ಭಾಗವಹಿಸಿದರು. ಪಿಡಿಒ ಜೆರಾಲ್ಡ್ ಮಸ್ಕರೇನಸ್ರವರು ಸ್ವಾಗತಿಸಿ, ನಿರೂಪಿಸಿದರು.