ಎಸ್‌ಎಸ್‌ಎಲ್‌ಸಿ: ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಜೀವನ್‌ಗೆ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ

0

ಪುತ್ತೂರು:ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 624 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ, ದಿ.ಹುಕ್ರಪ್ಪ ಗೌಡ ಅವರ ಪುತ್ರ ಜೀವನ್ ಅವರಿಗೆ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ ಮಾಡಲಾಯಿತು.

ಮೇ 23ರಂದು ಪುತ್ತೂರು ಎಪಿಎಂಸಿ ರಸ್ತೆಯಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಸಂಘದ ಆಡಳಿತ ಮಂಡಳಿಯವರು ಜೀವನ್ ಅವರನ್ನು ಅಭಿನಂದಿಸಿದರು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ರಾಮಕೃಷ್ಣ ಗೌಡ ಕರ್ಮಲ, ಸುದರ್ಶನ್ ಕೆ, ಪ್ರವೀಣ್ ಕುಂಟ್ಯಾನ, ಸತೀಶ್ ಪಾಂಬಾರು, ಜಿನ್ನಪ್ಪ ಗೌಡ ಮಳವೇಲು, ತೇಜಸ್ವಿನಿ ಶೇಖರ ಗೌಡ, ಮಾಜಿ ನಿರ್ದೇಶಕರಾದ ಲಿಂಗಪ್ಪ ಗೌಡ ಕಂಡೆಂಬಿಯಾರ್, ಜೀವನ್ ಅವರ ತಾಯಿ ಮೀನಾಕ್ಷಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಮತ್ತು ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here