ನೆಲ್ಯಾಡಿ: ವಿಶ್ವವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ಮೇ 20ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಕಂ ಟ್ರೈನರ್ ಆಗಿರುವ ಮಂಜೂಷರವರು ಕಾಲೇಜಿನ ಸಂಯೋಜಕ ಡಾ.ಜಯರಾಜ್ ಎನ್.,ರವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.
ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾಲೇಜಿನ ಸಹ ಸಂಯೋಜಕ ಡಾ.ಸೀತಾರಾಮ ಪಿ., ಸ್ವಾಗತಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಸಂಸ್ಥೆಯ ಸಂಚಾಲಕ, ಕನ್ನಡ ಉಪನ್ಯಾಸಕ ಡಾ. ನೂರಂದಪ್ಪ ವಂದಿಸಿದರು. ಕಾಲೇಜಿನ ಉಪನ್ಯಾಸಕ, ಉಪನ್ಯಾಸಕಿಯರು ಉಪಸ್ಥಿತರಿದ್ದರು.