ಪುತ್ತೂರು: ಮೇ 27ರಂದು ಬೆಳಿಗ್ಗೆ 10.30ಕ್ಕೆ ತಹಶೀಲ್ದಾರ್ ಗಳ ಗ್ರಾಮ ವಾಸ್ತವ್ಯ ನಡೆಯಲಿದೆ. ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮಕ್ಕೆ ಸಂಬಂಧಿಸಿ ಕೊಡಿಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ತಹಶೀಲ್ದಾರ್ ರಮೇಶ್ ಬಾಬು, ಕಡಬ ತಾಲೂಕಿನ ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ ತಹಶೀಲ್ದಾರ್ ಅನಂತ ಶಂಕರ್ ಮತ್ತು ಬಂಟ್ವಾಳ ತಾಲೂಕಿನ ಅನಂತಾಡಿ ಬಾಬನಕಟ್ಟೆ ಹಿ.ಪ್ರಾ.ಶಾಲೆಯಲ್ಲಿ ತಹಶೀಲ್ದಾರ್ ಡಾ. ಸ್ಮಿತಾ ರಾಮ್ ಅವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.