ಉಪ್ಪಿನಂಗಡಿ: ಕೊಪ್ಪಳ ಮನೆ ನಿವಾಸಿ ಸುರೇಶ್ ನಾಯ್ಕ್ ವಿಷ ಸೇವಿಸಿ ಆತ್ಮಹತ್ಯೆ

0

ಉಪ್ಪಿನಂಗಡಿ: ಇಲ್ಲಿನ 34 ನೇ ನೆಕ್ಕಿಲಾಡಿ ಗ್ರಾಮದ ಕೊಪ್ಪಳ ಮೆನೆ ಎಂಬಲ್ಲಿ ವಿಷ ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ.
ಕೊಪ್ಪಳ ಮನೆ ನಿವಾಸಿ ಸುರೇಶ್ ನಾಯ್ಕ್ ( 45) ಎಂಬವರೇ ಆತ್ಮಹತ್ಯೆಗೈದವರಾಗಿದ್ದು, ಬುಧವಾರ ರಾತ್ರಿ ಕ್ರಿಮಿ ನಾಶಕವನ್ನು ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿಯೇ ಸಾವನ್ನಪ್ಪಿದ್ದಾರೆಂದು ಮೃತರ ಪತ್ನಿ ಅನಿತಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here