ಪ್ರಧಾನಿ ಮೋದಿ ಸರಕಾರಕ್ಕೆ 8 ವರ್ಷ ಪೂರ್ಣಕ್ಕೆ ಹಲವು ಕಾರ್ಯಕ್ರಮ: ಬನ್ನೂರಿನಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಸಭೆಯಲ್ಲಿ ಪಿ.ಜಿ.ಜಗನ್ನಿವಾಸ ರಾವ್

0

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ರಚನೆಯಾಗಿ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಸರಕಾರದ ಯೋಜನೆಯನ್ನು ಮನೆ ಮನೆ ತಲುಪಿಸುವ ಕಾರ್ಯಕ್ರಮಕ್ಕೆ ಕಾರ್ಯಕರ್ತರು ತಮ್ಮ ಸಮಯ ಕೊಡಬೇಕೆಂದು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರು ಹೇಳಿದರು.


ನಗರಸಭೆ ಸದಸ್ಯೆ ಗೌರಿ ಬನ್ನೂರು ಅವರ ಬನ್ನೂರು ನಿವಾಸದಲ್ಲಿ ಮೇ 26ರಂದು ಸಂಜೆ ನಡೆದ ಬಿಜೆಪಿ ಶಕ್ತಿ ಕೇಂದ್ರದ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಎಂಟು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆಗಳನ್ನು ಇಟ್ಟಿದ್ದು, ಕೋವಿಡ್ ನಂತಹ ಮಹಾಮಾರಿ ಭಾರತ ಸೇರಿದಂತೆ ಜಗತ್ತನ್ನೇ ತಲ್ಲಣಗೊಳಿಸಿತ್ತು. ಟೀಕೆ, ಟಿಪ್ಪಣಿಯ ನಡುವೆಯೂ ಭಾರತ ಕೋವಿಡ್ ಸೋಂಕನ್ನು ಸಮರ್ಥವಾಗಿ ನಿಭಾಯಿಸಿ ಜಾಗತಿಕ ಮಟ್ಟದಲ್ಲಿ ಶ್ಲಾಘನೆಗೊಳಾಗಿತ್ತು. ಮುಂದಿನ ದಿನ ಸರಕಾರದ ಯೋಜನೆಗಳನ್ನು ಮನೆ ಮನೆ ಮುಟ್ಟಿಸುವ ಕೆಲಸದಲ್ಲಿ ಕಾರ್ಯಕರ್ತರು ಶ್ರಮವಹಿಸಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಮುಖ್ ಇಂದುಶೇಖರ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ನಗರಸಭಾ ಸದಸ್ಯರಾದ ಮೋಹಿನಿ ವಿಶ್ವನಾಥ್, ಪ್ರೇಮನಂದಿಲ, ಪದ್ಮನಾಭ ನಾಯ್ಕ್, ಬಿಜೆಪಿ ಪದಾಧಿಕಾರಿಗಳಾದ ಆನಂದ್ ಕುಲಾಲ್, ರಾಮಣ್ಣ ಗೌಡ, ದೀಪಿಕಾ ಇಂದಿರಾ ಸುಲೋಚನಾ, ಗೋವರ್ಧನ್, ಚಂದ್ರಶೇಕರ್, ಹರೀಶ್ ಕುಲಾಲ, ಮನೋಹರ್ ರೈ, ಚಿದಾನಂದ, ಸಚಿನ, ಗೋಪಾಲ್ ಕೃಷ್ಣ, ಶವೀನ್ ಬಿ ಯಸ್ ಸೇರಿದಂತೆ ನಗರ ಮೋರ್ಚಾ, ಪ್ರಕೋಷ್ಟಗಳ ಪ್ರಮುಖರು, ಪಕ್ಷದ ಹಿರಿಯರು, ಕಾರ್ಯಕರ್ತರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here