ಬೆಟ್ಟಂಪಾಡಿಯಲ್ಲಿ ಜಲಜೀವನ್ ಮಿಷನ್ ಜಾಗೃತಿ ಬೀದಿ ನಾಟಕ

0

 

ಬೆಟ್ಟಂಪಾಡಿ: ದ.ಕ. ಜಿಲ್ಲಾ ಪಂಚಾಯತ್ ವತಿಯಿಂದ ಜಲಜೀವನ್ ಮಿಷನ್ ಅಡಿಯಲ್ಲಿ ‘ಸ್ವಚ್ಛತೆ, ಆರೋಗ್ಯ ಮತ್ತು ನೀರಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಬೀದಿ ನಾಟಕ ಮೇ 27 ರಂದು ಬೆಟ್ಟಂಪಾಡಿ ಪಂಚಾಯತ್ ಮುಂಭಾಗದಲ್ಲಿ ನಡೆಯಿತು.

ಬೆಟ್ಟಂಪಾಡಿ ಗ್ರಾ.ಪಂ. ಅಧ್ಯಕ್ಷೆ ಪವಿತ್ರ ಡಿ. ಮತ್ತು ನಿಡ್ಪಳ್ಳಿ ಗ್ರಾ.ಪಂ. ಅಧ್ಯಕ್ಷೆ ಗೀತಾ ಚೆಂಡೆ ಬಡಿಯುವ ಮೂಲಕ ಚಾಲನೆ ನೀಡಿದರು. ಮಂಗಳೂರಿನ ಕೈಕಂಬ ಪಿಂಗಾರ ಕಲಾವಿದರು ನಾಟಕ ನಡೆಸಿಕೊಟ್ಟರು.

ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಉಮಾವತಿ, ವಿದ್ಯಾಶ್ರೀ, ನಿಡ್ಪಳ್ಳಿ ಗ್ರಾ.ಪಂ. ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್, ಸದಸ್ಯರಾದ ಮುರಳೀಕೃಷ್ಣ ಮುಂಡೂರು, ಡಾ. ಸತೀಶ್ ರಾವ್, ಬೆಟ್ಟಂಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂದೇಶ್, ಕಾರ್ಯದರ್ಶಿ ಬಾಬು ನಾಯ್ಕ್, ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದರು.

LEAVE A REPLY

Please enter your comment!
Please enter your name here