ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್ನ ಸಹಕಾರದೊಂದಿಗೆ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಸಾರ್ವಜನಿಕರ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೇ 27ರಂದು ಗ್ರಾಮ ಪಂಚಾಯತ್ನ ಸಭಾಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೇತನಾ ಶಿಬಿರ ಉದ್ಘಾಟಿಸಿದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರವರು ಮಾತನಾಡಿ, ಶಿಬಿರದ ಎಲ್ಲಾ ರೀತಿಯ ತಪಾಸಣೆ ನಡೆಸಲಾಗುತ್ತಿರುವುದರಿಂದ ಜನರಿಗೆ ಇದೊಂದು ಬಹಳಷ್ಟು ಸಹಕಾರಿಯಾಗುತ್ತಿದೆ. ಉಚಿತವಾಗಿ ಸಿಗುವ ಸೌಲಭ್ಯವನ್ನು ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮದ ಎಲ್ಲರೂ ಆರೋಗ್ಯವಂತರಾಗಲಿ ಎಂದು ಹೇಳಿದರು. ಪಿಡಿಒ ಮಂಜುಳ ಎನ್.,ಸ್ವಾಗತಿಸಿದರು. ಗ್ರಾ.ಪಂ.ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಶಿಬಿರದ ವೈದ್ಯ ಮನೋಹರ, ಗ್ರಾ.ಪಂ.ಸದಸ್ಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.