ಪುತ್ತೂರು: ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ಮಂಡಳಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವಾರ್ಷಿಕೋತ್ಸವ ಪ್ರಯುಕ್ತ ಸತ್ಯದತ್ತ ವ್ರತ ಪೂಜೆಯು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಮೇ 30ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಜರುಗಲಿದೆ.
ಬೆಳಿಗ್ಗೆ ಗಂಟೆ 9 ರಿಂದ ಮಧ್ಯಾಹ್ನ 12 ಗಂಟೆಯ ತನಕ ಭಜನಾ ಕಾರ್ಯಕ್ರಮ, ಧಾರ್ಮಿಕ ಸಭೆ ಬಳಿಕ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಲಿದೆ. ಧಾರ್ಮಿಕ ಸಭೆಯಲ್ಲಿ ವಿಕಲ ಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಶ್ರೀ ಗುರುದೇವದತ್ತ ಸಂಸ್ಥಾನಮ್ನ ಸಾಧ್ವಿ ಶ್ರೀ ಮಾತಾನಂದಾಮಯಿ ಅವರು ದಿವ್ಯ ಉಪಸ್ಥಿತಿಯಲ್ಲಿರುತ್ತಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ ಹಾರ್ವಿನ್, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಪದ್ಮಶ್ರೀ ಸೋಲಾರ್ ಸಿಸ್ಟಮ್ಸ್ನ ಸೀತಾರಾಮ ರೈ ಕೆದಂಬಾಡಿಗುತ್ತು, ಪದ್ಮಶ್ರೀ ಎಸೋಸಿಯೇಟ್ಸ್ನ ಕೃಷ್ಣ ಕುಲಾಲ್ ಎಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಒಡಿಯೂರು ವಜ್ರಮಾತಾ ಮಹಿಳಾ ಮಂಡಳಿ ಅಧ್ಯಕ್ಷೆ ನಯನಾ ರೈ, ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಅವರು ತಿಳಿಸಿದ್ದಾರೆ.