![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನಿಡ್ಪಳ್ಳಿ;ನೊಂದಾಯಿತ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕ ಮಂಡಳಿಯಲ್ಲಿ ನೋಂದಾಯಿತರಾದ ಸದಸ್ಯರಿಗೆ ಹಾಗೂ ಅವರ ಅವಲಂಬಿತರಿಗೆ ಮತ್ತು ಎಲ್ಲಾ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ ಮೇ.30 ರಂದು ಬೆಳಿಗ್ಗೆ ಗಂಟೆ 9 ರಿಂದ ಬೆಟ್ಟಂಪಾಡಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪಿಡಿಒ ಸಂದೇಶ್ ಮತ್ತು ಅಧ್ಯಕ್ಷೆ ಪವಿತ್ರ. ಡಿ ತಿಳಿಸಿದ್ದಾರೆ.
ಶಿಬಿರಕ್ಕೆ ಬರುವಾಗ ಈ ಕೆಳಗಿನ ದಾಖಲೆ ಬೇಕು
1.ಮಂಡಳಿಯಿಂದ ನೀಡಲಾದ ನೊಂದಣಿ ಕಾರ್ಡ್
2.ಆಧಾರ್ ಕಾರ್ಡ್
3.ಅವಲಂಬಿತರಿಗಾಗಿ ರೇಷನ್ ಕಾರ್ಡಿನ ಪ್ರತಿ