ನಿಡ್ಪಳ್ಳಿ; ಕಳೆದ 5 ವರ್ಷಗಳಿಂದ ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ ಕುಮಾರ್. ಎಂ ಇವರು ವರ್ಗಾವಣೆ ಗೊಂಡು ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಗೆ ಮೇ.30 ರಂದು ಸಮಾಜ ಶಿಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿ ಇಲ್ಲಿ 2011 ರಿಂದ ಸಹಶಿಕ್ಷಕರಾಗಿ 5 ವರ್ಷ ಸೇವೆ ಸಲ್ಲಿಸಿ 2016 ರಿಂದ ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು.ಇದೀಗ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಗೊಂಡು ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ತೆರವಾಗಿದ್ದ ಸಮಾಜ ಶಿಕ್ಷಕ ಹುದ್ದೆ ಭರ್ತಿಗೊಂಡಂತಾಗಿದೆ. ಇವರು ಜೆಸಿಐ ಇಂಡಿಯಾದ ವಲಯ ತರೆಬೇತುದಾರರಾಗಿದ್ದು, ಅಂಗ್ಲಭಾಷಾ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಪಡೆದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿ.ಇಡಿ ಪದವಿ ಪಡೆದಿದ್ದಾರೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಿತ್ತಮೂಲೆ ಇಲ್ಲಿಯ ಮೂಲ ನಿವಾಸಿಯಾಗಿದ್ದು ಪ್ರಸ್ತುತ ಆರ್ಯಾಪು ಗ್ರಾಮದ ಸಂಪ್ಯದಲ್ಲಿ ವಾಸವಾಗಿದ್ದಾರೆ.