ಕೆಮ್ಮಾರದಲ್ಲಿ ಸ್ಕಾರ್ಫಿಯೋ ಡಿಕ್ಕಿ, ಶಾಲಾ ವಿದ್ಯಾರ್ಥಿನಿಗೆ ಗಂಭೀರ ಗಾಯ

0

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೆಮ್ಮಾರದಲ್ಲಿ ಮೇ. 30ರಂದು ಬೆಳಿಗ್ಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯೋರ್ವಳಿಗೆ ಸ್ಕಾರ್ಫಿಯೋ ಕಾರು ಡಿಕ್ಕಿ ಹೊಡೆದಿದ್ದು, ಬಾಲಕಿಯ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಗಾಯಗೊಂಡಿರುವ ಬಾಲಕಿ ಕೆಮ್ಮಾರ ಬಡ್ಡಮೆ ನಿವಾಸಿ ಮುನಾಝ್ ಎಂಬವರ ಪುತ್ರಿ ರಿಝಾ ಫಾತಿಮಾ ಎಂಬಾಕೆಯಾಗಿದ್ದು, ಕೆಮ್ಮಾರ ದ.ಕ.ಜಿ.ಪ. ಶಾಲೆಯ ೨ನೇ ತರಗತಿಯ ವಿದ್ಯಾರ್ಥಿಯಾಗಿರುತ್ತಾಳೆ. ಈಕೆ ಬೆಳಿಗ್ಗೆ ಮದ್ರಸಕ್ಕೆ ಹೋಗಿ ಬರುವಾಗ ಕಡಬ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಸ್ಕಾರ್ಫಿಯೋ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಡಿಕ್ಕಿ ಸಂಭವಿಸಿದ ತಕ್ಷಣ ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷೆ ಸಲೀಕತ್ ಮತ್ತು ಯಾಕೂಬ್ ಎಂಬವರು ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು, ಪ್ರಥಮ ಚಿಕಿತ್ಸೆ ಕೊಡಿಸಲಾಗಿ ಮಂಗಳೂರು ಕರೆದೊಯ್ದಿದ್ದು, ಮಂಗಳೂರು ಇಂಡಿಯಾನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಡಬ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here