ಬಹುಮುಖ ಪ್ರತಿಭೆ ಜ್ಞಾನ ರೈಗೆ ಕರುನಾಡ ಸಿರಿ ಪ್ರಶಸ್ತಿ ಪ್ರದಾನ

0

ಪುತ್ತೂರು: ಪುತ್ತೂರಿನ ಬಹುಮುಖ ಪ್ರತಿಭೆ ಜ್ಞಾನ ರೈಯವರಿಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಕರುನಾಡ ಸಿರಿ’ ರಾಜ್ಯಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.


ಶ್ರೀ ಸರ್ವೇಜನಃ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಬೆಂಗಳೂರು ಇದರ ಐದನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಹಬ್ಬ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜ್ಞಾನ ರೈಯವರಿಗೆ ಜ್ಯೋತಿಷ್ಯ ಬ್ರಹ್ಮ ಡಾ. ಗೋಪಾಲಕೃಷ್ಣ ಶರ್ಮ ಗುರೂಜಿ, ಕನ್ನಡ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಓಂಸಾಯಿಪ್ರಕಾಶ್, ಬೆಂಗಳೂರು ಕೇಂದ್ರ ರಾಷ್ಟ್ರೀಯ ನಾಟಕ ಶಾಲೆ ನಿರ್ದೇಶಕಿ ವೀಣಾ ಶರ್ಮ, ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆಯ ರಾಜ್ಯಾಧ್ಯಕ್ಷ ರಂಗಕರ್ಮಿ ಕೆಂಚನೂರು ಶಂಕರ್, ಖ್ಯಾತ ಸಂಗೀತ ನಿರ್ದೇಶಕ ಶಶಿಧರ್ ಕೋಟೆ, ಶ್ರೀ ಸರ್ವೆಜನಃ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಅಧ್ಯಕ್ಷೆ ಲಕ್ಷಿತಾ ಗಂಗಾವತಿ, ಕರುನಾಡ ಸಿರಿ ರಾಜ್ಯ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಿದರು.
ಸಿದ್ದಗಂಗಾಶ್ರೀ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ, ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ, ಸಮಾಜ ಸೇವಾ ರತ್ನ ರಾಜ್ಯಪ್ರಶಸ್ತಿ, ಕರುನಾಡ ತಾರೆ ರಾಜ್ಯ ಪ್ರಶಸ್ತಿ, ಆದಿಗ್ರಾಮೋತ್ಸವ ಪ್ರತಿಭಾ ಸಿರಿ ಗೌರವ ಪ್ರಶಸ್ತಿ, ಸುದ್ದಿ ಬಿಡುಗಡೆಯ ಪ್ರತಿಭಾ ದೀಪ ಪ್ರಶಸ್ತಿ ಪುರಸ್ಕೃತೆಯಾಗಿರುವ ಬಾಲಪ್ರತಿಭೆ ಜ್ಞಾನ ರೈ ಕುರಿಯ ಈಗಾಗಲೇ ಹಲವಾರು ಕಿರುಚಿತ್ರ ಹಾಗೂ ಆಲ್ಬಂ ಸಾಂಗ್ ಗಳಲ್ಲಿ ನಟಿಸುವ ಮೂಲಕ ಗಮನ ಸೆಳೆದಿದ್ದು, ನೃತ್ಯ, ಅಭಿನಯ ಮಾತ್ರವಲ್ಲದೆ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲೂ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಹಲವಾರು ಫೋಟೋ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ವಿಜೇತೆಯಾಗಿರುವ ಇವರು ಜಾಹೀರಾತಿನಲ್ಲೂ ನಟಿಸಿರುತ್ತಾರೆ.
ಧಾರ್ಮಿಕ ಶಿಕ್ಷಣದತ್ತ ಒಲವು ತೋರಿರುವ ಇವರು ಕೂಡ್ಲಿಗಿಯ ಗುರುದೇವ ಗುರುಕುಲದ ಶಶಿಧರ್ ಗುರೂಜಿಯವರಿಂದ ಭಗವದ್ಗೀತೆ ಪಠಣ, ನಿತ್ಯ ಶ್ಲೋಕಗಳು, ಅಬಾಕಸ್, ಗಾಂಧಾರಿ ವಿದ್ಯೆಯನ್ನು ಕಲಿತಿರುತ್ತಾರೆ. ಪ್ರಸ್ತುತ ಭರತನಾಟ್ಯ, ಸಂಗೀತ, ಯಕ್ಷಗಾನ, ಕರಾಟೆ, ಯೋಗ ಅಭ್ಯಾಸದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಹನ್ನೊಂದರ ಹರೆಯದ ಜ್ಞಾನ ರೈಯವರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ. ಕುರಿಯ ಅಡ್ಯೆತ್ತಿಮಾರು ನಿವಾಸಿಯಾಗಿರುವ ಉದ್ಯಮಿ ಜಯರಾಮ ರೈ ಹಾಗೂ ಪತ್ರಕರ್ತೆ ಹೇಮಾ ಜಯರಾಮ್ ರೈ ಯವರ ಪುತ್ರಿ.

LEAVE A REPLY

Please enter your comment!
Please enter your name here