ಕೊಗರಪ್ಪ ಶೆಟ್ಟಿಯವರಿಗೆ ಬೀರಮಲೆ ಪ್ರಜ್ಞಾ ಆಶ್ರಮದಲ್ಲಿ ನುಡಿನಮನ

0

ಪುತ್ತೂರು: ಅರಿಯಡ್ಕ ಗ್ರಾಮದ ಗೋಳ್ತಿಲ ಕೊರಗಪ್ಪ ಶೆಟ್ಟಿಯವರಿಗೆ ನುಡಿನಮನ ಕಾರ್ಯಕ್ರಮ ಬೀರಮಲೆ ಮಾನಸಿಕ ವಿಕಲಚೇತನರ ಪುನರ್ವಸತಿ ಕೇಂದ್ರ ಪ್ರಜ್ಞಾ ಆಶ್ರಮದಲ್ಲಿ ನಡೆಯಿತು.

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ಪ್ರಧಾನ ಕಾರ್ಯದರ್ಶಿ ಭವಿತ್ ಮಜ್ಜಾರ್‌ರವರು ನುಡಿನಮನ ಹಾಗೂ ಕಾರ್ಯಕ್ರಮ ನಿರೂಪಿಸಿದರು. 1 ಗಂಟೆಗಳ ಕಾಲ ಭಜನಾ ಕಾರ್ಯಕ್ರಮ ನಡೆದು ಬಳಿಕ ಪ್ರಜ್ಞಾ ಆಶ್ರಮದವರಿಗೆ ವಿಶೇಷ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಂಘಟನೆಯ ವತಿಯಿಂದ ಧನ ಸಹಾಯ ಮಾಡಲಾಯಿತು.
ಈ ಸಂದರ್ಭದಲ್ಲಿ ಅಣ್ಣಪ್ಪ ದಂಪತಿಗಳು, ಕೊರಗಪ್ಪ ಶೆಟ್ಟಿಯವರ ಪತ್ನಿ ಶ್ಯಾಮಲ, ಸೊಸೆ ಜಯಲಕ್ಷ್ಮೀ, ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ಪದಾಧಿಕಾರಿಗಳು, ಸದಸ್ಯರುಗಳು, ಮಹಿಳಾ ಸದಸ್ಯರುಗಳು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಕೊರಗಪ್ಪ ಶೆಟ್ಟಿಯವರ ಪುತ್ರ ರಾಜೇಶ್ ಕೆ.ಮಯೂರ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here