ಕರ್ನಾಟಕ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಆರ್‌ಟಿಒ ಆನಂದ ಗೌಡರವರಿಗೆ ಅಭಿನಂದನೆ

0

ಪುತ್ತೂರು: ಪುತ್ತೂರಿನ ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಗೌಡ ಕರ್ತವ್ಯದಿಂದ ನಿವೃತ್ತಿ ಹೊಂದುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.



ಪುತ್ತೂರಿನ ರಿಕ್ಷಾ ಚಾಲಕರಿಗೆ ಸ್ನೇಹಜೀ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ ಮತ್ತು ರಿಕ್ಷಾ ಚಾಲಕರಿಗೆ ಬಾಡಿಗೆ ಹಾಗೂ ಇನ್ನಿತರ ವಿಚಾರದಲ್ಲಿ ಸಮಸ್ಯೆ ಬಂದಾಗ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಯನ್ನು ಪರಿಹರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಅರುಣ್ ಕುಮಾರ್ ರೈ, ಕಾರ್ಯಧ್ಯಕ್ಷ ಕೆ.ಜಯರಾಮ ಕುಲಾಲ್, ಸಲಹೆಗಾರ ಗಿರೀಶ್ ನಾಯ್ಕ ಸೊರಕೆ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಪುತ್ತು, ಮಾಜಿ ಅಧ್ಯಕ್ಷರಾದ ನಾಸೀರ್ ಇಡಬೆಟ್ಟು ,ಉಪಾಧ್ಯಕ್ಷರಾದ ನಾರಾಯಣ ಗೌಡ,ಸದಸ್ಯರಾದ ಕೋಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here