ಪುತ್ತೂರು:ಮೇ 31ರಂದು ಸೇವಾ ನಿವೃತ್ತಿ ಹೊಂದಿರುವ 34 ನೆಕ್ಕಿಲಾಡಿ ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕಿ ರುಕ್ಮಿಣಿ ಡಿ.ಯವರಿಗೆ ಬೀಳ್ಕೊಡುಗೆ ಸಮಾರಂಭ ಎಸ್.ಡಿ.ಎಂ.ಸಿ. ಅಧ್ಯಕ್ಷ ಧರ್ಣಪ್ಪ ಗೌಡರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮ ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಸಹಶಿಕ್ಷಕಿ ಪದ್ಮಾ ಸ್ವಾಗತಿಸಿದರು. ಬಳಿಕ ಎಸ್.ಡಿ.ಎಂ.ಸಿ. ಅಧ್ಯಕ್ಷ ಧರ್ಣಪ್ಪ ಗೌಡ, ಉಪಾಧ್ಯಕ್ಷೆ ಜಯಮ್ಮ ಮತ್ತು ನಮ್ಮೂರು ನೆಕ್ಕಿಲಾಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಯುನಿಕ್ ರವರು ಶುಭ ಹಾರೈಸಿದರು. ಮುಖ್ಯ ಗುರು ರುಕ್ಮಿಣಿರವರಿಗೆ ಶಾಲು ಹೊದಿಸಿ ಹಾರ ಹಾಕಿ ಫಲಪುಷ್ಪ ತಾಂಬೂಲದೊಂದಿಗೆ ಸನ್ಮಾನಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದಲೂ ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು. ಬಿ. ಎಸ್. ಡಬ್ಲ್ಯೂ ವಿದ್ಯಾರ್ಥಿಗಳ ಎಚ್ ಒ ಡಿ. ನಂದೀಶ್ ವೈ. ಡಿ. ಉಪಸ್ಥಿತರಿದ್ದರು. ಸಹಶಿಕ್ಷಕಿ ಕಾವೇರಿ. ಸಿ. ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಉಷಾ ಕುಮಾರಿ ವಂದಿಸಿದರು. ಶಿಕ್ಷಕರಾದ ಚಿತ್ರಾವತಿ, ಪೂರ್ಣಿಮಾ ಮತ್ತು ಗೀತಾ ಸಹಕರಿಸಿದರು. ಮಧ್ಯಾಹ್ನ ಸಿಹಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು.