ಕಾಣಿಯೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಶಂಕರ ಭಟ್. ಪಿ ಅಧಿಕಾರ ಸ್ವೀಕರಿಸಿದ್ದಾರೆ. 2014 ರಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲದಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ಯಾನಕ್ಕೆ ನಿಯೋಜಿತರಾಗಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು, ಇದೀಗ ಕನ್ಯಾನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವರ್ಗಾವಣೆಯಾಗಿ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಕಬಕ ಗ್ರಾಮದ ಪೋಳ್ಯ ಸಮೀಪದ ಕೆದುವಡ್ಕದ ನಿವಾಸಿಯಗಿದ್ದಾರೆ.