ಪುತ್ತೂರು: ಮೇ 31 ರಂದು ಶಿಕ್ಷಕ ಸೇವೆಯಿಂದ ನಿವೃತ್ತಗೊಂಡ ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೂ ಹಾಗೂ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ನ ಪ್ರಧಾನ ಕಾರ್ಯದರ್ಶಿಯಾಗಿರುವ ದಯಾನಂದ ರೈ ಕೋರ್ಮಂಡರವರಿಗೆ ಜೂ.೪ ರಂದು ಶನಿವಾರ ಸಂಜೆ ದರ್ಬೆ ಬಳಿ ಬೀಳ್ಕೊಡುಗೆ ಅಭಿನಂದನಾ ಸನ್ಮಾನ ಕಾರ್ಯಕ್ರಮ ನೆರವೇರಲ್ಪಡುವುದು.
ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ನಿಂದ ಏರ್ಪಡಿಸಿರುವ ಪ್ರೊ ಕಬಡ್ಡಿ ಟೂರ್ನಮೆಂಟ್ ಆಗಲಿ, ಇತರ ಯಾವುದೇ ಕಾರ್ಯಚಟುವಟಿಕೆಗಳಾಗಲಿ, ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ನ ಬೆಳವಣಿಗೆಯಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಾ ಬಂದಿರುವ ಮಾತ್ರವಲ್ಲದೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿರುವ ನಿವೃತ್ತ ದಯಾನಂದ ರೈ ಕೋರ್ಮಂಡರವರನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ನ ಪದಾಧಿಕಾರಿಗಳು ಹಾಗೂ ಸದಸ್ಯರು, ರೆಫ್ರೀ ಬೋರ್ಡ್ನ ಸದಸ್ಯರು ಸಭೆಗೆ ಹಾಜರಾಗಬೇಕಾಗಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ನ ಗೌರವಾಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಅಧ್ಯಕ್ಷ ಸುರೇಂದ್ರ ರೈ ನೇಸರ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.