ಪುತ್ತೂರು: ಧೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ, ವರ್ತಮಾನ ಕಾಲದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಮಾಡುವ ಮೂಲಕ ಪುತ್ತೂರು ನಗರಸಭೆಯಲ್ಲಿ ಅಭಿವೃದ್ಧಿಗೆ ವೇಗ ನೀಡಿ ಕಾಲಮಿತಿಯೊಳಗೆ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ಹೇಳಿದರು.
ಕೇಪುಳು, ಸಿದ್ಯಾಲ ರಸ್ತೆಗೆ ರೂ. 34ಲಕ್ಷ ಅನುದಾನದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಮಾತನಾಡಿ ನಗರಸಭೆಯಿಂದ ರಿಂಗ್ ರೋಡ್ಗಳಿಗೆ ಆದ್ಯತೆ ನೀಡಿ ಬಹುಕಾಲದ ಬೇಡಿಕೆಯ ರಸ್ತೆಗಳು ಅಭಿವೃದ್ಧಿ ಕಾಣಲಿದೆ ಎಂದರು. ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆ ಸ್ಥಳೀಯ ಸದಸ್ಯರಾದ ಸುಂದರ ಪೂಜಾರಿ ಬಡಾವು, ಲೀಲಾವತಿ, ಕೊಂಬೆಟ್ಟು ವಾರ್ಡ್ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಯಾನಂದ ಮತ್ತು ಆನಂದ ಕುಲಾಲ್ ಅತಿಥಿಗಳನ್ನು ಗೌರವಿಸಿದರು. ಉದಯ ಆಚಾರ್ಯ ವಂದಿಸಿದರು. ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಮಾಜಿ ಪುರಸಭೆ ಅಧ್ಯಕ್ಷರಾದ ರಾಜೇಶ್ ಬನ್ನೂರು, ಲೋಕೇಶ್ ಹೆಗ್ಡೆ, ನಗರಸಭೆ ಹಾಲಿ ಸದಸ್ಯರು, ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸ್ಥಳೀಯರಾದ ಬಾಲಪ್ಪ ಪೂಜಾರಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.