ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ನೂತನ ಸಭಾಂಗಣ ಉದ್ಘಾಟನೆ

0

  • ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕರಿಗೆ ಸನ್ಮಾನ

ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ನೂತನ ಸಭಾಂಗಣ ಉದ್ಘಾಟನೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ ಜೂ.4ರಂದು ನಡೆಯಿತು. ಈಶ್ವರಮಂಗಲ ಖತೀಬ್ ಸಯ್ಯದ್ ಎನ್‌ಪಿಎಂ ಜಲಾಲುದ್ದೀನ್ ತಂಙಳ್ ಅಲ್ ಬುಖಾರಿ ಕುನ್ನುಂಗೈ ದುವಾಶೀರ್ವಚನ ನೀಡಿದರು. ಮಧುರಾ ವಿದ್ಯಾಸಂಸ್ಥೆಯ ಅಧ್ಯಕ್ಷ ಹನೀಫ್ ಮಧುರಾ ಅವರ ತಾಯಿ ಖತೀಜಮ್ಮ ಮಧುರಾ ಅವರು ನೂತನ ಸಭಾಂಗಣ ಉದ್ಘಾಟಿಸಿದರು.

ನಂತರ ನಡೆದ ಸಭೆಯನ್ನು ಗಿಡಕ್ಕೆ ನೀರೆರೆಯುವ ಮೂಲಕ ನೆ.ಮುಡ್ನೂರು ಗ್ರಾ.ಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಉದ್ಘಾಟಿಸಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀ ಹರೇಕಳ ಹಾಜಬ್ಬ ಹಾಗೂ ಶ್ರೀ ಮಹಾಲಿಂಗ ನಾಯ್ಕ ವಿಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

AVP-L&zÀ Pharmed Limited Bengaluruಇದರ ವಿಕ್ರಂ ಸಾಗರ್ ಸಕ್ಸೇನ, ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ, ಮಧುರಾ ಸ್ಕೂಲ್‌ನ ಕಾರ್ಯನಿರ್ವಾಹಕ ಶೈಕ್ಷಣಿಕ ನಿರ್ದೇಶಕ ರಫೀಕ್ ಮಾಸ್ಟರ್ ಮೊದಲಾದವರು ಸಮಯೋಚಿತವಾಗಿ ಮಾತನಾಡಿದರು. ಸಂಸ್ಥೆಯ ಮುಖ್ಯ ಶಿಕ್ಷಕಿ ರಮ್ಲತ್ ಕೆ ಸ್ವಾಗತಿಸಿದರು. ಶಿಕ್ಷಕಿ ಶ್ವೇತಾ ಮರಿಯಾ ಡಿಸೋಜಾ ವಂದಿಸಿದರು. ಶಿಕ್ಷಕಿ ರಾಬಿಯಾ ಕಾರ್ಯಕ್ರಮ ನಿರೂಪಿಸಿದರು. ಮಧುರಾ ವಿದ್ಯಾಸಂಸ್ಥೆಯ ಅಧ್ಯಕ್ಷ ಹನೀಫ್ ಮಧುರಾರವರು ಅತಿಥಿಗಳನ್ನು ಗೌರವಿಸಿದರು. ಶಿಕ್ಷಕ ವೃಂದದವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಮಧುರಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು, ಪೋಷಕರು, ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here