ಕಾಣಿಯೂರು: ಮುರುಳ್ಯ ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಶ್ರೀ ದೇವರ ಶಿಲಾ ವಿಗ್ರಹ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವವು ಜೂ 4ರಿಂದ ಜೂ6ರವರೆಗೆ ಮೂಡಬಿದಿರೆ ಎನ್. ಕೇಶವ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ. ಜೂ 4ರಂದು ತಂತ್ರಿಗಳ ಋತ್ವಿಜರ ಸ್ವಾಗತ ಶಿಲ್ಪಿಗಳಿಂದ ಆಲಯಪರಿಗ್ರಹ, ದೇವತಾ ಪ್ರಾರ್ಥನೆ, ತೋರಣ ಪ್ರತಿಷ್ಠೆ, ಗುರುಗಣಪತಿ ಪೂಜೆ, ಪುಣ್ಯಾಹ ವಾಚನ, ನಾಂದಿ, ಅಂಕುರಾರ್ಪಣೆ, ಕಂಕಣಧಾರಣೆ, ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಸಂಜೆ ಉಗ್ರಾಣ ಮುಹೂರ್ತ, ಮಂಟಪ ಸಂಸ್ಕಾರಯಾಗ, ಮಂಟಪ ಪ್ರವೇಶ, ಗುರುಗಣಪತಿ ಪೂಜೆ, ಪುಣ್ಯಾಹವಾಚನ, ಪ್ರಸಾದ ಶುದ್ಧಿ, ಅಘೋರ ಹೋಮ, ವಾಸ್ತು ಪೂಜೆ ಹೋಮ, ದಿಗ್ಬಲಿರಕ್ಷೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಜನಾರ್ದನ ಆಚಾರ್ಯ ಕುಕ್ಕಟ್ಟೆ, ಆಡಳಿತ ಸಮಿತಿ ಅಧ್ಯಕ್ಷ, ಬಿ.ಕೆ ಧನಂಜಯ ಆಚಾರ್ಯ ಏನೆಕಲ್ಲು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು, ಜೇರ್ಣೋದ್ಧಾರ ಸಮಿತಿ ಅಧ್ಯಕ್ಷ ರವೀಂದ್ರ ಆಚಾರ್ಯ ಇಳಂತಿಲ, ಗೌರವಾಧ್ಯಕ್ಷ ಬಾಲಕೃಷ್ಣ ಮರೋಳಿ, ಕಾರ್ಯದರ್ಶಿಗಳಾದ ಬಾಲಕೃಷ್ಣ ಪುರೋಹಿತ್, ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಮಧುಚಂದ್ರ ಆಚಾರ್ಯ, ಕಾರ್ಯಾಧ್ಯಕ್ಷ ವಸಂತ ಗೌಡ ನಡುಬೈಲು, ರವಿಚಂದ್ರ ಆಚಾರ್ಯ ಸಂಪ್ಯ,ಚಿನ್ನಯ್ಯ ಆಚಾರ್ಯ ಕುಕ್ಕಟ್ಟೆ, ಗೋಪಾಲಕೃಷ್ಣ ಪುರೋಹಿತ್ ಕುಕ್ಕಟ್ಟೆ, ರಮೇಶ್ ಆಚಾರ್ಯ ಕುಕ್ಕಟ್ಟೆ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.