ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು, ಬೆಟ್ಟಂಪಾಡಿ ವಲಯದ ನಿಡ್ಪಳ್ಳಿ ಒಕ್ಕೂಟದ ತ್ರೈಮಾಸಿಕ ಸಭೆ ನಿಡ್ಪಳ್ಳಿ ಪ್ರಾಥಮಿಕ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ರಾಧಾಕೃಷ್ಣ ಪಾಟಾಳಿ ಬಡಕ್ಕಾಯೂರು ಇವರ ಅಧ್ಯಕ್ಷತೆಯಲ್ಲಿ ಜೂ.5 ರಂದು ನಡೆಯಿತು.
ವಲಯ ಮೆಲ್ವೀಚಾರಕ ಶಿವಪ್ಪರವರು ಯೋಜನೆಯ ಹೊಸ ಯೋಜನೆ ಬಗ್ಗೆ ಮತ್ತು ಪರಿಸರ ದಿನಾಚರಣೆ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.ವಲಯಾಧ್ಯಕ್ಷ ನವೀನ್ ಕುಮಾರ್. ಎಂ, ಪದಾಧಿಕಾರಿಗಳಾದ ಕಾರ್ಯದರ್ಶಿ ಶ್ರೀಮತಿ, ಜತೆ ಕಾರ್ಯದರ್ಶಿ ಹೇಮಾ. ಸಿ.ಎಚ್, ಕೋಶಾಧಿಕಾರಿ ತಿಮ್ಮಪ್ಪ ನಲಿಕೆ, ಸೇವಾ ಪ್ರತಿನಿಧಿ ಜಗನ್ನಾಥ ಪಾಟಾಳಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರು ಪಾಲ್ಗೊಂಡರು.