ಪುತ್ತೂರು: ಕೋಡಿಂಬಾಡಿ ಗ್ರಾಮದ ದಾರಂದಕುಕ್ಕು ಹೊಸ ಅಂಗನವಾಡಿ ಕೇಂದ್ರದಲ್ಲಿ ಜೂನ್ 5ರಂದು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಸಿಂಧು ಪ್ರಭು, ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರು, ಅಂಗನವಾಡಿ ಕಾರ್ಯಕರ್ತೆ ವೇದಾವತಿ, ಸಹಾಯಕಿ ವೀಣಾ, ಪೋಷಕರಾದ ವಿದ್ಯಾ ಪ್ರಭು, ತ್ರಿವೇಣಿ ಮೋಹನ ಗೌಡ, ಖೈರುನ್ನಿಸಾ, ಸಾಹಿರಾ ಮತ್ತು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.