ಪುತ್ತೂರು: ಭಾರತ್ ಕಟ್ಟಡ ಕಾರ್ಮಿಕ ಸಂಘದ ಮಾಸಿಕ ಸಭೆಯು ಬೊಳುವಾರಿನ ಸಂಘದ ಕಚೇರಿಯಲ್ಲಿ ಗೌರವಾಧ್ಯಕ್ಷ ಲೋಕೇಶ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಳೆದ ತಿಂಗಳು ಮೇ ದಿನಾಚರಣೆ ಯಂದು ರಕ್ತದಾನ ಮಾಡಿದ ಸದಸ್ಯರಿಗೆ ಇದೇ ಸಂದರ್ಭದಲ್ಲಿ ಕಾರ್ಡ್ ವಿತರಣೆ ಮಾಡಲಾಯಿತು. ಸಂಘದ ಅಧ್ಯಕ್ಷ ಇನಾಸ್ ವೇಗಾಸ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಸಂತ ಬೆದ್ರಾಳ ವಂದಿಸಿದರು. ವೇದಿಕೆಯಲ್ಲಿ ಕಾರ್ಯಾಧ್ಯಕ್ಷ ಪೌಲ್ ಡಿಸೋಜ, ಖಜಾಂಚಿ ರಷೀದ್ ಅಹ್ಮದ್, ಸಂಘಟನಾ ಕಾರ್ಯದರ್ಶಿ ಅಣ್ಣಿ ಪೂಜಾರಿ ಮತ್ತು ಅಶ್ರಫ್ ಉಪಸ್ಥಿತರಿದ್ದರು.