ಆರ್ಲಪದವು: ಉಚಿತ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

0

ನಿಡ್ಪಳ್ಳಿ: ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ಕಲಾ ಸಂಘ ಆರ್ಲಪದವು ಪಾಣಾಜೆ ಇದರ ಆಶ್ರಯದಲ್ಲಿ ನಾಟ್ಯಗುರು ಬಾಲಕೃಷ್ಣ ಪೂಜಾರಿ ಉಡ್ಡಂಗಳ ಇವರ ನೇತೃತ್ವದಲ್ಲಿ 2022-23 ನೇ ಸಾಲಿನ ಉಚಿತ ಯಕ್ಷಗಾನ ನಾಟ್ಯ ತರಬೇತಿಯು ಜೂ.5 ರಂದು ಆರ್ಲಪದವು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮದಿರದಲ್ಲಿ ಉದ್ಘಾಟನೆ ಗೊಂಡಿತು.

ಹಿರಿಯರಾದ ಪಿ.ಜಿ. ಶಂಕರನಾರಾಯಣ ಭಟ್ ಪಾಣಾಜೆ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ  ಡಾ.ಅಖಿಲೇಶ್ ಪಾಣಾಜೆ.ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್,ಪಾಣಾಜೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರವೀಂದ್ರ ಭಂಡಾರಿ ಬೈಂಕ್ರೊಡು,ಉಪ್ಪಳಿಗೆ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಮಕೃಷ್ಣ ಪಡುಮಲೆ,ಯಕ್ಷಗಾನ ಭಾಗವತ ಸತೀಶ್ ಇರ್ದೆ, ಶಿವಪ್ರಸಾದ್ ತಲೆಪ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
 
ಸಂಘದ ಅಧ್ಯಕ್ಷ ನಾಟ್ಯಗುರು ಬಾಲಕೃಷ್ಣ ಪೂಜಾರಿ ಉಡ್ಡಂಗಳ ಸ್ವಾಗತಿಸಿದರು.  ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಲಾವಿದ ಸತ್ಯನಾರಾಯಣ ಅಡಿಗ ವಂದಿಸಿದರು.ಸುರೇಶ್ ಕಡಂದೇಲು   ಕಾರ್ಯಕ್ರಮ ನಿರೂಪಿಸಿದರು.ಸಂಘದ ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here