ಪುತ್ತೂರು: ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ಸರ್ವೆ ಎಸ್ಜಿಎಂ ಪ್ರೌಢಶಾಲೆಯ ಆವರಣದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು. ಶಾಲೆಯ ಆವರಣದಲ್ಲಿ ರಸ್ತೆ ಬದಿ ಬೆಳೆದಿದ್ದ ಪೊದೆಗಳನ್ನು ತೆರವುಗೊಳಿಸಲಾಯಿತು. ಶ್ರಮದಾನದಲ್ಲಿ ಯುವಕ ಮಂಡಲದ ಅಧ್ಯಕ್ಷ ಗೌತಮ್ರಾಜ್ ಕರುಂಬಾರು, ಪ್ರ.ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ, ಪದಾಧಿಕಾರಿಗಳಾದ ಚಿರಾಗ್ ರೈ ಮೇಗಿನಗುತ್ತು, ಲಕ್ಷ್ಮಣ ಆಚಾರ್ಯ ಭಕ್ತಕೋಡಿ, ಅಶೋಕ್ ಸರ್ವೆದೋಳಗುತ್ತು, ಮಾಜಿ ಅಧ್ಯಕ್ಷ ಸುರೇಶ್ ಸರ್ವೆದೋಳಗುತ್ತು, ಕಮಲೇಶ್ ಸರ್ವೆದೋಳಗುತ್ತು ಕಾರ್ಯಕಾರಿ ಸಮಿತಿ ಸಂಚಾಲಕ ರಾಮಣ್ಣ ಪೂಜಾರಿ ಭಕ್ತಕೋಡಿ ಪಾಲ್ಗೊಂಡಿದ್ದರು.