ಪುತ್ತೂರು : ಪುತ್ತೂರಿನ ಹೃದಯಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಗತಿ ಸ್ಟಡಿಸೆಂಟರ್ನಲ್ಲಿ ಬೆಂಗಳೂರು ಬುಲ್ಸ್ ತಂಡಕ್ಕೆ ಆಯ್ಕೆಯಾದ ಪ್ರಗತಿ ಸ್ಟಡಿ ಸೆಂಟರ್ನ ಮೊಹಮ್ಮದ್ ರಿಹಾಂಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕ ಗೋಕುಲ್ ನಾಥ್ ಪಿ.ವಿ ಮಾತನಾಡಿ ಕ್ರಿಕೆಟ್ನ ಬಗ್ಗೆ ಮಕ್ಕಳಿಗೆ ಮಾಹಿತಿಯ ಜೊತೆಗೆ ಆಯ್ಕೆಯಾದ ವಿದ್ಯಾರ್ಥಿಗೆ ಶುಭಾಶಯ ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾ ಗೋಕುಲನಾಥ್ ಮಾತನಾಡಿ ಶುಭ ಹಾರೈಸಿದರು. ಮೊಹಮ್ಮದ್ ರಿಹಾಂ ಮಾತನಾಡಿ ಪ್ರಗತಿ ಸಂಸ್ಥೆಯಲ್ಲಿ ಪಡೆದ ತರಗತಿಯ ಕುರಿತು ಹಾಗೂ ತನ್ನ ಸಾಧನೆಗೆ ಕಾರಣರಾದವರನ್ನು ಸ್ಮರಿಸಿದರು. ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಮಾಧವಿ ನಿರೂಪಿಸಿದರು. ಉಪನ್ಯಾಸಕ ಪದ್ಮನಾಭ ಭಟ್ ಸ್ವಾಗತಿಸಿದರು. ಮೇಘಶ್ರೀ ವಂದಿಸಿದರು.