ಕಡಬ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ರಾಜೀವ್ ಗಾಂಧಿ ವಸತಿ ನಿಗಮ ಬೆಂಗಳೂರು, ಕಡಬ ತಾಲೂಕು ಪಂಚಾಯತ್ ಇದರ ಸಹಯೋಗದಲ್ಲಿ ಕಡಬ ತಾಲೂಕಿನ 2021-22ನೇ ಸಾಲಿನ ಬಸವ ವಸತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯ ಫಲಾನುಭವಿಗಳಿಗೆ ಕಾರ್ಯಾದೇಶ ನೀಡುವ ಸಮಾರಂಭ ಜೂ.6 ರಂದು ಕಡಬ ಸಂತ ಜೋಕಿಮ್ಸ್ ಚರ್ಚ್ ಸಮುದಾಯ ಭವನದಲ್ಲಿ ನಡೆಯಿತು.
ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದು ಫಲಾನುಭವಿಗಳಿಗೆ ಕಾಮಗಾರಿ ಆದೇಶವನ್ನು ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಸಮ್ಮುಖದಲ್ಲಿ ವಿತರಿಸಿದರು.
ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಕಡಬ ತಾಲೂಕು ಸಹಾಯಕ ನಿರ್ದೇಶಕರು (ಗ್ರಾ.ಉ.) ಚೆನ್ನಪ್ಪ ಗೌಡ, ದ.ಕ.ಜಿಲ್ಲಾ ವಸತಿ ನೋಡೆಲ್ ಅಧಿಕಾರಿ ಸವಿತಾ ಕೆ. ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ೭೩೦ ಫಲಾನುಭವಿಗಳು ಕಾಮಗಾರಿ ಆದೇಶ ಪತ್ರವನ್ನು ಪಡೆದುಕೊಂಡಿದ್ದರು.