ಕಬಕ ಗ್ರಾ. ಪಂ. ನಿಂದ ವಿದ್ಯಾಪುರ ಕಾಲೋನಿಯಲ್ಲಿ ಒಣ ಕಸ ಸಂಗ್ರಹ ಚೀಲ ವಿತರಣೆ

0

ಪುತ್ತೂರು: ಕಬಕ ಗ್ರಾಮ ಪಂಚಾಯತ್ ವತಿಯಿಂದ ವಿದ್ಯಾಪುರ ಕಾಲೋನಿಯಲ್ಲಿ ಜೂ.6ರಂದು ಸ್ವಚ್ಛ ಭಾರತ ಮಿಷನ್ ಯೋಜನೆಯ ಅಂಗವಾಗಿ ಒಣ ಕಸ ಸಂಗ್ರಹ ಚೀಲಗಳನ್ನು ಮನೆ ಮನೆಗಳಿಗೆ ವಿತರಿಸಲಾಯಿತು.

ಕಬಕ ಪಂಚಾಯತ್ ಅಧ್ಯಕ್ಷರಾದ ವಿನಯಕುಮಾರ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷರಾದ ರುಕ್ಮಯ್ಯ ಗೌಡ, ಪುತ್ತೂರು ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯ ಪುರುಷೋತ್ತಮ ಮುಂಗ್ಲಿಮನೆ, ಗ್ರಾಮ ಪಂಚಾಯತ್ ಸದಸ್ಯರಾದ ಉಮ್ಮರ್ ಫಾರೂಕ್, ನಜೀರ್, ಸುಶೀಲ, ಶಾಬಾ, ಪಿಡಿಒ ಆಶಾ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here