ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಎನ್.ಎಮ್.ಎಮ್.ಎಸ್ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಶಾಲೆಯ ಹಿರಿಯ ವಿದ್ಯಾರ್ಥಿಯಾಗಿರುವ, ಸರಕಾರಿ ಭೂ ಮಾಪಕರಾದ ವಿನುತಾ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸತೀಶ್ ಭಟ್ರವರು ಎನ್.ಎಮ್.ಎಮ್.ಎಸ್ ಪರೀಕ್ಷೆಯ ಮಹತ್ವ ಮತ್ತು ಅದರ ವಿವಿಧ ಉಪಯೋಗಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಮುಖ್ಯ ಅತಿಥಿಯಾಗಿದ್ದ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ನಿಂಗರಾಜುರವರು ಶುಭ ಹಾರೈಸಿದರು. ವಿಘ್ನೇಶ್ ವಿ., ಸ್ವಾಗತಿಸಿ, ಮೋಕ್ಷ ವಂದಿಸಿದರು. ಭವ್ಯ ನಿರೂಪಿಸಿದರು.