ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಅಧಿಕಾರಿಗಳಿಗೆ ಸಚಿವ ಸುನಿಲ್ ಕುಮಾರ್ ಸೂಚನೆ

0

  • ತಾಲೂಕಿನ ಕೊನೇ ಹಳ್ಳಿಯವರೆಗೆಅಧಿಕಾರಿಗಳು ಭೇಟಿ ನೀಡಬೇಕು
  • ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ ಬೇರೆ ಬೇರೆ ಹಳ್ಳಿಗೆ ಭೇಟಿ ನೀಡಬೇಕು
  • ಗಡಿಭಾಗದ ಹಳ್ಳಿಯಿಂದಾರಂಭಿಸಿ ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಿ

ಬೆಂಗಳೂರು: ರಾಜ್ಯದಲ್ಲಿ ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಸಬೇಕು ಎಂದು ಇಂಧನ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ವರೆಗಿನ ಅಧಿಕಾರಿಗಳು ತಾಲೂಕಿನ ಎಲ್ಲ ಹಳ್ಳಿಗಳಿಗೆ ಹೋಗಿ ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಬೇರೆ ಹಳ್ಳಿಗಳಿಗೆ ಭೇಟಿ ನೀಡಿ ಕಾಲಮಿತಿಯಲ್ಲಿ ಅಭಿಯಾನವನ್ನು ಮುಗಿಸುವಂತೆ ಸಚಿವರು ತಿಳಿಸಿದ್ದಾರೆ.ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ರಿಂದ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳೂ ಅಭಿಯಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು.ಆದ್ಯತೆ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ, ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ವ್ಯವಸ್ಥಾಪಕ ನಿರ್ದೇಶಕರು ಪ್ರತಿ ೩ನೇ ಸೋಮವಾರ ತಪ್ಪದೇ emg 1 energygmal.com ಇ-ಮೇಲ್ ಮೂಲಕ ಸರ್ಕಾರಕ್ಕೆ ಕಳುಹಿಸಬೇಕೆಂದು ಸಚಿವ ಸುನಿಲ್ ಕುಮಾರ್ ಆದೇಶಿಸಿದ್ದಾರೆ.,

LEAVE A REPLY

Please enter your comment!
Please enter your name here