ರಾಮಕುಂಜ ಕ.ಮಾ.ಪ್ರೌಢಶಾಲೆಯಲ್ಲಿ ಪೋಷಕರ ಸಭೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ ನಡೆಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ಸತೀಶ್ ಭಟ್‌ರವರು, ಸಂಸ್ಥೆಯ ಆಶಯ ಮತ್ತು ಯೋಜನೆಯ ಬಗ್ಗೆ ಪೋಷಕರಿಗೆ ತಿಳಿಸಿದರು. ಗಣಿತ ಶಿಕ್ಷಕ ವೆಂಕಟೇಶ್ ದಾಮ್ಲೆಯವರು ಶಾಲೆಯ ಸೌಲಭ್ಯಗಳ ಬಗ್ಗೆ ವಿವರಿಸಿದರು. ಆಂಗ್ಲಭಾಷಾ ಶಿಕ್ಷಕ ಪ್ರವೀಣ್ ಕುಮಾರ್‌ರವರು ಹತ್ತನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿಯನ್ನು ನೀಡಿದರು. ಸಮಾಜ ವಿಜ್ಞಾನ ಶಿಕ್ಷಕ ದಿನೇಶ್ ಪಿ.ರವರು ಸ್ವಾಗತಿಸಿ, ವಿಜ್ಞಾನ ಶಿಕ್ಷಕ ಬಾಲಚಂದ್ರರವರು ವಂದಿಸಿದರು. ಕನ್ನಡಭಾಷಾ ಶಿಕ್ಷಕಿ ಸುಪ್ರೀತಾ ಕೆ.ರವರು ನಿರೂಪಿಸಿದರು.

LEAVE A REPLY

Please enter your comment!
Please enter your name here