ಸರ್ವೆ ಎಸ್.ಜಿ.ಎಂ ಪ್ರೌಢ ಶಾಲೆಯಲ್ಲಿ ಸಂಸ್ಥಾಪಕರ ದಿನಾಚರಣೆ-ಎಸ್ಸೆಸ್ಸೆಲ್ಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

0

ಪುತ್ತೂರು: ಸರ್ವೆ ಎಸ್.ಜಿ.ಎಂ ಪ್ರೌಢ ಶಾಲೆಯ ಸಂಸ್ಥಾಪಕರಾದ ಪಿ ವಿ ವಿಜಯ ಕುಮಾರ್‌ರವರ ಹುಟ್ಟು ಹಬ್ಬವನ್ನು ಸಂಸ್ಥಾಪಕರ ದಿನವನ್ನಾಗಿ ಆಚರಿಸಲಾಯಿತು. ಶಾಲಾ ಹಿರಿಯ ವಿದ್ಯಾರ್ಥಿ ಶಿವನಾಥ ರೈ ಮೇಗಿನಗುತ್ತು ಸಂಸ್ಥಾಪಕರ ಭಾವಚಿತ್ರಕ್ಕೆ ದೀಪ ಬೆಳಗಿಸಿ ನುಡಿ ನಮನ ಸಲ್ಲಿಸಿ ವಿಜಯ ಕುಮಾರ್‌ರವರ ಶಿಸ್ತು, ಕರ್ತವ್ಯದಲ್ಲಿ ಅವರಿಗಿದ್ದ ಒಲವು ಹಾಗೂ ಗುರುಭಕ್ತಿಯನ್ನು ನೆನಪಿಸಿ ಎಲ್ಲಾ ವಿದ್ಯಾರ್ಥಿಗಳು ಅವರ ಆದರ್ಶ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮನ್ನಡೆದು ಆದರ್ಶ ವಿದ್ಯಾರ್ಥಿಗಳೆನಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ 2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಶಾಲಾ ಸಂಸ್ಥಾಪಕರ ಸ್ಮರಣಾರ್ಥ ಶಾಲಾ ಸಂಚಾಲಕರಾದ ಡಾ.ಯಾದವಿ ಜಯಕುಮಾರ್‌ರವರು ನಗದು ಬಹುಮಾನವನ್ನಿತ್ತು ಗೌರವಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪಿ ಬಿ ಇಂದುಶೇಖರ್ ಸಂಸ್ಥಾಪಕರನ್ನು ಸ್ಮರಿಸಿಕೊಂಡು ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗೆ ಮಾರ್ಗದರ್ಶನ ನೀಡಿದರು.

ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶಶಿಧರ್ ಎಸ್ ಡಿ, ಮಹಾಬಲ ರೈ, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಅಶೋಕ್ ಎಸ್.ಡಿ, ಮುಂಡೂರು ಗ್ರಾ.ಪಂ ಸದಸ್ಯೆ ಕಾವ್ಯ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ವಂದಿಸಿದರು. ಶಾಲಾ ಕನ್ನಡ ಶಿಕ್ಷಕಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here