ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಯ ಪ್ರಾರಂಭೋತ್ಸವ

0

ಪುತ್ತೂರು: ಉಪ್ಪಿನಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಯ ಪ್ರಾರಂಭೋತ್ಸವ ಎಸ್.ಡಿ.ಎಂ.ಸಿ. ಅಧ್ಯಕ್ಷ ರವಿಚಂದ್ರ ಶಾಂತಿರವರ ಅಧ್ಯಕ್ಷತೆಯಲ್ಲಿ ನಡೆಯಿತು.

 

ಎಲ್. ಕೆ. ಜಿ ಮತ್ತು ಯು. ಕೆ. ಜಿ. ತರಗತಿಯ ಪ್ರಾರಂಭೋತ್ಸವವನ್ನು ವಾದ್ಯ ಘೋಷದೊಂದಿಗೆ ಮಕ್ಕಳನ್ನು ಮೆರವಣಿಗೆ ಮೂಲಕ ಸ್ವಾಗತಿಸಿ ನಡೆಸಲಾಯಿತು. ಬಳಿಕ ನಮ್ಮೂರು ನೆಕ್ಕಿಲಾಡಿಯ ಅಧ್ಯಕ್ಷ ಎ. ಜತೇಂದ್ರ ಶೆಟ್ಟಿಯವರು ತರಗತಿ ಕೊಠಡಿ ಉದ್ಘಾಟಿಸಿದರು. ನಂತರ ಸಭಾ ಕಾರ್ಯಕ್ರಮ ಜರಗಿತು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಚಂದ್ರ ಮುಳಿಯ, ಸದಸ್ಯರಾದ ತೌಸೀಫ್ ಯು. ಟಿ, ವಿದ್ಯಾಲಕ್ಷ್ಮಿ ಪ್ರಭು, ಸ್ಥಳೀಯ ಮಾಲಿಕ್ ದಿನಾರ್ ಮಸ್ಜಿದ್ ಅಧ್ಯಕ್ಷ ಹಾಗೂ ಹಿರಿಯ ವಿದ್ಯಾರ್ಥಿ ಮುಸ್ತಾಫಾ ಕೆಂಪಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಐ, ನಿಕಟ ಪೂರ್ವ ಮುಖ್ಯೋಪಾಧ್ಯಾಯಿನಿ ದೇವಕಿ ಎಂ, ಸಚಿನ್ ಸುಂದರ ಗೌಡ ಹಾಗೂ ಪ್ರಭಾರ ಮುಖ್ಯ ಗುರುಗಳಾಗಿದ್ದ ದೇಜಮ್ಮ ಭಾಗವಹಿಸಿದ್ದರು. ಮುಖ್ಯೋಪಾಧ್ಯಾಯ ಹನುಮಂತಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಿಕ್ಷಕಿ‌ ದೇವಕಿ ಕಾರ್ಯಕ್ರಮ ನಿರೂಪಿಸಿದರು.‌ ಪೂರ್ವ ಪ್ರಾಥಮಿಕ ಶಿಕ್ಷಕಿಯರಾದ ಸುಮಲತಾ ಹಾಗೂ ರಶ್ಮಿ ವಿವಿಧ ಕಾರ್ಯಕ್ರಮ‌ ನಿರ್ವಹಿಸಿದರು. ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಮೊಯಿದ್ದೀನ್‌ ಕುಟ್ಟಿ ಸಹಿತ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here